Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 20 ಜೂನ್ (ಫಿಕ್ರೋಖಬರ್ ಸುದ್ದಿ) ವಿತ್ತ ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ತಮ್ಮ ಸ್ಥಾನ ತೊರೆದು ಅಮೆರಿಕಕ್ಕೆ ಮರಳುತ್ತಿರುವುದಾಗಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
’ಕೆಲವು ದಿನಗಳ ಹಿಂದೆ ಮುಖ್ಯ ಆರ್ಥಿಕ ಸಲಹೆಗಾರ(ಸಿಇಎ) ಅರವಿಂದ್ ಸುಬ್ರಮಣಿಯನ್ ವಿಡಿಯೊ ಕಾನ್ಫೆರೆನ್ಸ್ ಮೂಲಕ ನನ್ನೊಂದಿಗೆ ಮಾತನಾಡಿದರು. ಅವರಿಗೆ ಬಹಳ ಮುಖ್ಯವಾಗಿರುವ ವೈಯಕ್ತಿಕ ಕಾರಣಗಳಿಂದಾಗಿ ಅಮೆರಿಕಕ್ಕೆ ಮರಳಲು ನಿರ್ಧರಿಸಿದ್ದಾರೆ. ಅವರ ನಿರ್ಧಾರಕ್ಕೆ ಒಪ್ಪದ ಹೊರತು ಬೇರೆ ಆಯ್ಕೆ ಇರಲಿಲ್ಲ’ ಎಂದು ಅರುಣ್ ಜೇಟ್ಲಿ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಅವರ ಮೂರು ವರ್ಷಗಳ ಸೇವಾವಧಿ ಪೂರ್ಣಗೊಂಡ ನಂತರವೂ ಸ್ಥಾನದಲ್ಲಿ ಮುಂದುವರಿಯುವಂತೆ ಜೇಟ್ಲಿ ಮನವಿ ಮಾಡಿದ್ದರು. ಆಗಲೂ ಕುಟುಂಬದ ಜವಾಬ್ದಾರಿ ಮತ್ತು ಹೆಚ್ಚು ಆತ್ಮತೃಪ್ತಿ ನೀಡುತ್ತಿರುವ ಕೆಲಸದ ನಡುವೆ ಆಯ್ಕೆಯ ಕ್ಲಿಷ್ಟತೆಯನ್ನು ಹೇಳಿಕೊಂಡಿದ್ದಾಗಿ ಪ್ರಕಟಿಸಿದ್ದಾರೆ.
ಭಾರತೀಯ ಆರ್ಥಿಕತೆಯ ಬೃಹತ್ ಆರ್ಥಿಕತೆ ನಿರ್ವಹಣೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿರುವ ಜೇಟ್ಲಿ, ’ನಿತ್ಯವೂ ಅನೇಕ ಬಾರಿ ನನ್ನ ಭೇಟಿಗೆ ಬರುತ್ತಿದ್ದ ಅವರು ಒಳ್ಳೇಸುದ್ದಿಯನ್ನು ಅಥವಾ ಮತ್ತಾವುದೇ ವಿಷಯವನ್ನು ಮುಟ್ಟಿಸುತ್ತಿದ್ದರು. ಅವರು ಎಲ್ಲಿಯೇ ಇದ್ದರೂ ಸಲಹೆ ಮತ್ತು ವಿಶ್ಲೇಷಣೆ ಕಳುಹಿಸುವ ಭರವಸೆಯಿದೆ’ ಎಂದಿದ್ದಾರೆ.
ಮೇ ಮಧ್ಯದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗುವುದಕ್ಕೂ ಮುನ್ನ ಜೇಟ್ಲಿ ಅವರು ವಿತ್ತ ಸಚಿವರಾಗಿದ್ದರು.
2014ರ ಅಕ್ಟೋಬರ್ 16ರಂದು ಸುಬ್ರಮಣಿಯನ್ ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಕವಾಗಿದ್ದರು. 2017ರಲ್ಲಿ ಅವರ ಸೇವಾವಧಿಯನ್ನು ಒಂದು ವರ್ಷಗಳ ವರೆಗೂ ವಿಸ್ತರಿಸಲಾಗಿತ್ತು.
arvind subramanian✔@arvindsubraman
Profoundly grateful & humbled by these extraordinarily generous words by Minister @arunjaitley announcing my decision to return-for personal reasons-to researching & writing. CEA job most rewarding, fulfilling, exciting I have ever had. Many many to thank:https://m.facebook.com/notes/arun-jaitley/thank-you-arvind/804077679780782/ …
arvind subramanian✔@arvindsubraman
My statement on the announcement of my departure from the job of CEA.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |