Urdu   /   English   /   Nawayathi

ಸಿಂಹಗಳ ದಾಳಿಯಿಂದ ಕುರಿಗಾಹಿ ಮಾಲೀಕನನ್ನು ರಕ್ಷಿಸಿದ ನಾಯಿ!

share with us

ರಾಜಕೋಟ: 22 ಜುಲೈ (ಫಿಕ್ರೋಖಬರ್ ಸುದ್ದಿ) ನಾಯಿ ಹಾಗೂ ಮಾನವನ ನಡುವೆ ಅವಿನಾಭಾವ ಸಂಬಂಧ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಹೌದು, ಕುರಿಗಾಹಿಯೊಬ್ಬರ ಮೇಲೆ ಸಿಂಹಗಳು ದಾಳಿ ನಡೆಸಿದ ಸಂದರ್ಭದಲ್ಲಿ ಆತ ಸಾಕಿದ ನಾಯಿ ಪ್ರಾಣದ ಹಂಗು ತೊರೆದು ಮಾಲೀಕನ ಪ್ರಾಣ ರಕ್ಷಿಸಿದ ದಯಸ್ಪರ್ಶಿ ಘಟನೆ ಅಮ್ರೆಲಿಯ ಸಾವರ್ಕುಂಡ್ಲಾದ ಅಂಬಾರ್ಡಿ ಹಳ್ಳಿಯಲ್ಲಿ ನಡೆದಿದೆ. 
ಭಾವೇಶ್ ಹಮೀರ್ ಭರ್ವಾದ್ (25) ಎಂಬಾತನೇ ಸಿಂಹಗಳ ದಾಳಿಯಲ್ಲಿ ಪಾರಾದ ಕುರಿಗಾಹಿ. ಸಿಂಹಗಳ ಭೀಕರ ದಾಳಿಯಲ್ಲಿ ಕುರಿಗಾಹಿ ಭಾವೇಶ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾವರ್ಕುಂಡ್ಲಾದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಹಳ್ಳಿಯ ಹೊರವಲಯದಲ್ಲಿ ಭಾವೇಶ್ ಕುರಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಮೂರು ಸಿಂಹಗಳು ಏಕಾಏಕಿ ದಾಳಿ ನಡೆಸಿದ್ದು, ಮೂರು ಕುರಿಗಳನ್ನು ಸಾಯಿಸಿವೆ. 
ಸಿಂಹಗಳ ದಾಳಿಯಿಂದ ತನ್ನ ಕುರಿಗಳನ್ನು ರಕ್ಷಿಸಲು ಹೋದ ಭಾವೇಶ್ ಮೇಲೆ ಸಹ ಸಿಂಹಗಳು ದಾಳಿ ನಡೆಸಲು ಮುಂದಾಗಿದ್ದವು. ಅಷ್ಟರಲ್ಲೇ ಆತ ಸಾಕಿದ ನಾಯಿ ಜೋರಾಗಿ ಬೋಗಳಲಾರಂಭಿಸಿ ಸಿಂಹಗಳು ಮುಂದೆ ಬರದಂತೆ ತಡೆದಿದೆ. ನಾಯಿ ನಿರಂತರ ಬೊಗಳುತ್ತಿರುವುದನ್ನು ಕೇಳಿಸಿಕೊಂಡ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಜನರ ಗುಂಪು ನೋಡಿ ಗಾಬರಿಗೊಂಡ ಸಿಂಹಗಳು ಸ್ಥಳದಿಂದ ಕಾಲ್ಕಿತ್ತಿವೆ. 
ಘಟನೆ ಸಂಬಂಧ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 

ವಿ, ಕ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا