Urdu   /   English   /   Nawayathi

ವಿಚ್ಛೇದನ ಕೋರಿದ ದಂಪತಿ ಒಂದು ಮಾಡಿದ ಸುಪ್ರೀಂಕೋರ್ಟ್‌ ಸಿಜೆ

share with us

ಹುಬ್ಬಳ್ಳಿ: 14 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ನಗರದ ನೂತನ ತಾಲೂಕು ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಆಗಮಿಸಿದ್ದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರು ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ವ್ಯಾಜ್ಯವೊಂದನ್ನು ಖುದ್ದಾಗಿ ಇತ್ಯರ್ಥ ಪಡಿಸಿದರು. ನಗರದ ಕೇಶ್ವಾಪುರ ನಿವಾಸಿ ಜಗದೀಶ ಶೆಳಗಿ ಹಾಗೂ ಪಾರ್ವತಿ ದಂಪತಿ ವಿಚ್ಛೇದನ ಪ್ರಕರಣ ವಿಶೇಷ ಲೋಕ ಅದಾಲತ್‌ನಲ್ಲಿ ಸುಪ್ರೀಂಕೋರ್ಟ್‌ ಸಿಜೆ ದೀಪಕ್‌ ಮಿಶ್ರಾ ಮುಂದೆ ವಿಚಾರಣೆಗೆ ಬಂತು. ನ್ಯಾಯಿಕ ಸಂಧಾನಕಾರರಾದ ಮಹೇಶ ಪಾಟೀಲ ಹಾಗೂ ವಕೀಲ ಸಂಧಾನಕಾರರಾದ ಶೋಭಾ ಪವಾರ ಪ್ರಕರಣ ನಿರ್ವಹಿಸುತ್ತಿದ್ದರು. ವಿಚ್ಛೇದನ ಕೋರಿದ ದಂಪತಿ ಹಾಗೂ ಮಕ್ಕಳಾದ ರೋಹಿತ, ನಂದಿನಿ, ರಕ್ಷಿತಾ ಹಾಗೂ ಸಿದ್ಧಾರ್ಥ ಅವರನ್ನು ಮುಖ್ಯ ನ್ಯಾಯಮೂರ್ತಿಗಳ ಎದುರು ಹಾಜರುಪಡಿಸಿದರು.

ದೀಪಕ್‌ ಮಿಶ್ರಾ ಅವರು ಪತಿ-ಪತ್ನಿಗೆ ಕೌಟುಂಬಿಕ ಮೌಲ್ಯಗಳನ್ನು ತಿಳಿಸಿ, ಒಂದಾಗಲು ಸಲಹೆ ನೀಡಿದರು. ನ್ಯಾಯಮೂರ್ತಿಗಳ ಮಾತು ಕೇಳಿದ ದಂಪತಿ ತಮ್ಮ ವಿಚ್ಛೇದನ ಪ್ರಕರಣ ಹಿಂಪಡೆದು ಮರಳಿ ಒಂದಾದರು. ಭಾನುವಾರ ಒಟ್ಟು 9 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಶೇಷ ಲೋಕ ಅದಾಲತ್‌ನಲ್ಲಿ ಬಗೆಹರಿಸಲಾಯಿತು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا