Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ದೆಹಲಿ: 08 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಹೆಚ್ಚುವರಿ ದರವನ್ನು ಕೇಳಿದ ಆಟ್ರೋ ಡ್ರೈವರ್ ನನ್ನು ಪ್ರಯಾಣಿಕರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಾತ್ರಿ ವೇಳೆ ಸೇವೆ ಹಾಗೂ ಹೆಚ್ಚುವರಿ ಪ್ರಯಾಣಿಕರಿದ್ದ ಕಾರಣ ಆಟೋ ಡ್ರೈವರ್ ಹೆಚ್ಚುವರಿ ಹಣ ನೀಡುವಂತೆ ಕೇಳಿದ್ದಾನೆ. ಇದರಿಂದ ಕುಪಿತಗೊಂಡ ಪ್ರಯಾಣಿಕರು ಚಾಕುವಿನಿಂದ 26 ವರ್ಷದ ಆಟೋ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದು, ಕೊಂದೇ ಬಿಟ್ಟಿದ್ದಾರೆ.
ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ರಕ್ತಸಿಕ್ತ ಚಾಕು ಪತ್ತೆಯಾಗಿದೆ. ದೆಹಲಿಯ ಹೃದಯ ಭಾಗ ಕೊನ್ನಾಟ್ ಪ್ರದೇಶದಲ್ಲಿ ಈ ಹತ್ಯೆ ನಡೆದಿದೆ. ರಕ್ತದ ಮಡುವಿನಲ್ಲಿ ಬಿದಿದ್ದ ಆಟೋ ಡ್ರೈವರ್ ನನ್ನು ನೋಡಿದ ಪ್ರಯಾಣಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ರಾಮ್ ಮನೋಹರ್ ಲೊಹಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಆತ ಮೃತಪಟ್ಟಿದ್ದಾನೆ. ಮೃತನನ್ನು ಜಹಂಗೀರ್ ಅಲಂ ಎಂದು ಗುರುತಿಸಲಾಗಿದೆ.
ಕೊನ್ನಾಟ್ ಪ್ರದೇಶದಲ್ಲಿಯೇ ಇದ್ದ ಪೊಲೀಸರು ಈ ಹತ್ಯೆ ಮಾಡಿದ 19 ವರ್ಷದ ಯುವಕನೊಬ್ಬನನ್ನು ಬಂಧಿಸಿದ್ದಾರೆ. ನಂತರ ಇನ್ನಿಬರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ನವದೆಹಲಿ ಉಪ ಪೊಲೀಸ್ ಆಯುಕ್ತ ಮಧುರ್ ವರ್ಮಾ ತಿಳಿಸಿದ್ದಾರೆ.
ದಕ್ಷಿಣ ದೆಹಲಿಯ ಕಾನ್ಪುರದಿಂದ ಕೊನ್ನಾಟ್ ಪ್ರದೇಶಕ್ಕೆ ತೆರಳಲು ನಾಲ್ವರು ಬಾಡಿಗೆಗೆ ಆಟೋ ಪಡೆದುಕೊಂಡಿದ್ದಾರೆ. ಮಾರ್ಗ ಮಧ್ಯದಲ್ಲಿ ರಾತ್ರಿ ಸೇವೆ ಹಾಗೂ ಹೆಚ್ಚುವರಿ ಪ್ರಯಾಣಿಕರಿದ್ದ ಕಾರಣ ಹೆಚ್ಚುವರಿ ದರ ನೀಡುವಂತೆ ಆಟೋ ಡ್ರೈವರ್ ಕೇಳಿದ್ದಾನೆ. ಇದರಿಂದಾಗಿ ವಾಗ್ವಾದ ನಡೆದು ಚಾಕುವಿನಿಂದ ಇರಿದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆಯಲ್ಲಿ ಬಾಯ್ಬಿಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |