Urdu   /   English   /   Nawayathi

ಮಂಗನ ಕಾಯಿಲೆ ನಿಯಂತ್ರಿಸಲು ವಿಫಲ: ಡಿಹೆಚ್ಒ ಸೇರಿ ಇಬ್ಬರ ಅಮಾನತು

share with us

ಶಿವಮೊಗ್ಗ: 22 ಜನುವರಿ (ಫಿಕ್ರೋಖಬರ್ ಸುದ್ದಿ) ಜಿಲ್ಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಿ, ಸಾವು - ನೋವಿಗೆ ಕಾರಣರಾದ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಕೆಎಫ್​ಡಿ ನಿರ್ದೇಶಕರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ಮಾಡಿದ್ದಾರೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಬಣ ಹಾಗೂ ಸಾವು-ನೋವಿಗೆ ಕಾರಣರಾಗಿ ಕರ್ತವ್ಯಲೋಪ ಎಸಗಿದ ಆರೋಪದ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹಾಗೂ ಜಿಲ್ಲಾ ಪರಮಾಣು ಕ್ರಿಮಿ ಸಂಶೋಧನಾ ಕೇಂದ್ರದ ಉಪ ನಿರ್ದೇಶಕ ಡಾ. ರವಿ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. 

ಡಾ. ವೆಂಕಟೇಶ್ ಇತ್ತೀಚೆಗಷ್ಟೆ ಕೋಲಾರ ಜಿಲ್ಲೆಯಿಂದ ವರ್ಗಾವಣೆಯಾಗಿ ಬಂದಿದ್ದರು. ಜಿಲ್ಲೆಯಲ್ಲಿ ಕೆಎಫ್​​​ಡಿ ಇಷ್ಟೊಂದು ಪ್ರಮಾಣದಲ್ಲಿ ಹರಡಿ, ಸಾವು ಸಂಭವಿಸಿದ್ದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಮೇಲಾಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಸದರಿ ಡಿಹೆಚ್ಒ ಸ್ಥಾನಕ್ಕೆ ಡಾ. ರಾಜೇಶ್ ಸೂರಗಿಹಳ್ಳಿಯವರನ್ನು ನೇಮಕ ಮಾಡಿ ಆದೇಶ ನೀಡಲಾಗಿದೆ. ಡಾ. ರಾಜೇಶ್ ಸೂರಗಿಹಳ್ಳಿ ಅವರು ಈ ಹಿಂದೆ ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಣೆ ಮ‌ಾಡಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا