Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕಾರವಾರ: 26 ಜನುವರಿ (ಫಿಕ್ರೋಖಬರ್ ಸುದ್ದಿ) ನಗರದಲ್ಲಿ ನಾಗರಿಕ ವಿಮಾನ ನಿಲ್ದಾಣ ಸಂಬಂಧ ನೌಕಾನೆಲೆ ಅಧಿಕಾರಿಗಳೊಂದಿಗೆ ಈಗಾಗಲೇ ಜಿಲ್ಲಾಡಳಿತ ಚರ್ಚೆ ನಡೆಸಿದ್ದು, ಇರುವ ತೊಡಕುಗಳನ್ನು ನಿವಾರಿಸಿ ಸದ್ಯದಲ್ಲಿಯೇ ಕಾಮಗಾರಿ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಧ್ವಜಾರೋಹಣ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೀಬರ್ಡ್ ಆರಂಭದ ವೇಳೆ 2 ಹಂತದಲ್ಲಿ ಏರ್ಪೋರ್ಟ್ ನಿರ್ಮಾಣ ಮಾಡುವ ಬಗ್ಗೆ ತಿಳಿಸಿತ್ತು. ಅದರಂತೆ ಇದೀಗ 2ನೇ ಹಂತದ ಕಾಮಗಾರಿ ಪ್ರಾರಂಭವಾಗಿದ್ದು, ಜಿಲ್ಲಾಡಳಿತ ಏರ್ಪೋರ್ಟ್ ನಿರ್ಮಾಣದ ಕುರಿತು ಸೀಬರ್ಡ್ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದೆ. ಇದರಿಂದ ನೌಕಾನೆಲೆ ಹಾಗೂ ನಾಗರಿಕರಿಗೆ ಅನುಕೂಲವಾಗುವಂತೆ ನಾಗರಿಕ ವಿಮಾನಯಾನ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಜಿಲ್ಲೆಗೆ ಬಂದಿರುವ ಹಲವು ಯೋಜನೆಗಳಿಂದ ಕೆಲವರಿಗೆ ತೊಂದರೆಯಾಗಿದೆ. ಇದರಿಂದ ಕೆಲವು ಜನರು ಸಹಜವಾಗಿಯೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಏರ್ಪೋಟ್ನಿಂದ ಸಾಕಷ್ಟು ಅಭಿವೃದ್ಧಿಯಾಗಿರುವುದರಿಂದ ಈ ಬಗ್ಗೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಡಿಮೆ ಪ್ರಮಾಣದ ಜನರಿಗೆ ತೊಂದರೆಯಾಗುವ ರೀತಿಯಲ್ಲಿ ಯೋಜನೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.
ಮಂಗನ ಕಾಯಿಲೆ ಉತ್ತರ ಕನ್ನಡ ಸೇರುದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕಂಡುಬಂದಿದೆ. ಜಿಲ್ಲೆಯ ಸಿದ್ದಾಪುರ, ಶಿರಸಿ ಮತ್ತು ಇದೀಗ ಬನವಾಸಿಯಲ್ಲಿಯೂ ಮಂಗನ ಕಾಯಿಲೆ ಹರಡಿದೆ. ಆದರೆ ಈಗಾಗಲೇ ಮಂಗಗಳು ಸಾವನ್ನಪ್ಪಿದ ಪ್ರದೇಶದ ಸುತ್ತಮುತ್ತಲಿನ ಐದು ಕಿ.ಮೀ. ವ್ಯಾಪ್ತಿಯಲ್ಲಿ ವ್ಯಾಕ್ಸಿನೇಷನ್ ಮಾಡಲಾಗುತ್ತಿದೆ. ಆದರೆ ಔಷಧ ಕಡಿಮೆಯಾಗಿದ್ದು, ಜಿಲ್ಲಾಡಳಿತ ಇದನ್ನು ತರುವುದಕ್ಕೆ ಕ್ರಮ ಕೈಗೊಂಡಿದೆ. ದೇಶದಲ್ಲಿ ಏಕೈಕ ಔಷಧಿ ತಯಾರಿಕಾ ಕೇಂದ್ರವಿರುವುದರಿಂದ ಸಮಸ್ಯೆಯಾಗಿದೆ ಎಂದು ಹೇಳಿದರು. ಕಾರವಾರದಲ್ಲಿ ನಡೆದ ಬೋಟ್ ದುರಂತದ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ತನಿಖೆ ಆರಂಭಿಸಿದ್ದಾರೆ. ಮುಂದೆ ಇಂತಹ ಸಮಸ್ಯೆಗಳು ಆಗದಂತೆ ನೀರಿಗೆ ಇಳಿಯುವ ಮುನ್ನ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿಯಮಗಳನ್ನು ರೂಪಿಸಬೇಕಿದೆ. ಈಗಾಗಲೇ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ನೀಡಲು ಮುಖ್ಯಮಂತ್ರಿ ಒಪ್ಪಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ ಎಂದು ಹೇಳಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |