Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 30 ಜನುವರಿ (ಫಿಕ್ರೋಖಬರ್ ಸುದ್ದಿ) ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರು ಮಾರಾಮಾರಿ ನಡೆದು ಓರ್ವ ವಿದ್ಯಾರ್ಥಿ ಕೊಲೆಯಾಗಿರುವ ಘಟನೆ ಬೆಂಗಳೂರು ನಗರದಲ್ಲಿನ ನಾಗಸಂದ್ರದಲ್ಲಿ ನಡೆದಿದೆ. ನಾಗಸಂದ್ರದ ಸೌಂದರ್ಯ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಯಾ ಸಾಗರ್ (18) ಹತ್ಯೆಯಾಗಿದ್ದಾನೆ. ಇದೇ ಕಾಲೇಜಿನ ವಿದ್ಯಾರ್ಥಿ, ಸಾಗರ್ ಸಹಪಾಠಿಯೂ ಆಗಿದ್ದ ರಕ್ಷಿತ್ ಇನ್ನಿಬ್ಬರೊಡನೆ ಸೇರಿ ಈ ಕೃತ್ಯವೆಸಗಿದ್ದಾನೆ. ದಯಾ ಸಾಗರ್ ಹಾಗೂ ರಕ್ಷಿತ್ ಇಬ್ಬರೂ ಪಿಯು ವ್ಯಾಸಂಗ ಮಾಡುತ್ತಿದ್ದು ಸೌಂದರ್ಯ ಕಾಲೇಜಿನಲ್ಲಿ ಓದುತ್ತಿದ್ದರು. ದಯಾ ಸಾಗರ್ ಯುವತಿಯೊಬ್ಬಳಿಗೆ ತನ್ನ ಮೊಬೈಲ್ ನಿಂದ ಸಂದೇಶ ಕಳಿಸುತ್ತಿದನೆನ್ನಲಾಗಿದ್ದು ಈ ಕುರಿತು ಹಿಂದೆ ಅನೇಕ ಬಾರಿ ಆರೋಪಿ ರಕ್ಷಿತ್, ಸಾಗರ್ ಗೆ ಎಚ್ಚರಿಸಿದ್ದ. ಆದರೆ ಸಾಗರ್ ಮಾತ್ರ ಸಂದೇಶ ಕಳಿಸುವುದನ್ನು ಬಿಟ್ಟಿರಲಿಲ್ಲ.
ಬುಧವಾರ ಬೆಳಿಗ್ಗೆ ಸಹ ಆರೋಪಿ ರಕ್ಷಿತ್ ಹಾಗೂ ದಯಾ ಸಾಗರ್ ಅವರ ಮದ್ಯೆ ಈ ವಿಚಾರಕ್ಕೆ ಜಗಳವಾಗಿದೆ. ಆಗ ರಕ್ಷಿತ್ ಬ್ಯಾಗ್ ನಲ್ಲಿದ್ದ ಚಾಕು ತೆಗೆದು ಇರಿದಿದ್ದಾನೆ. ಕಾಲೇಜಿನ ನಾಲ್ಕನೇ ಅಂತಸ್ತಿನಲ್ಲಿರುವ ಶೌಚಾಲಯದಲ್ಲಿ ಈ ಕೃತ್ಯ ನಡೆದಿದೆ. ಬಲವಾಗಿ ಇರಿದ ಕಾರಣ ದಯಾ ಸಾಗರ್ ಗೆ ತೀವ್ರ ರಕ್ತಸ್ರಾವವಾಗಿದೆ. ಇದನ್ನು ಕಂಡ ಸಹಪಾಠಿಗಳು ದಯಾ ಸಾಗರ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವನು ಸಾವಿಗೀಡಾಗಿದ್ದಾನೆ. ಘಟನೆ ಸಂಬಂಧ ಕಾಲೇಜು ಆಡಳಿತ ರಕ್ಶಿತ್ ಸೇರಿ ಮೂವರು ವಿದ್ಯಾರ್ಥಿಗಳನ್ನು ಪೋಲೀಸರಿಗೆ ಒಪ್ಪಿಸಿದೆ. ಬಾಗಲಗುಂಟೆ ಪೋಲೀಸರು ತನಿಖೆ ಕೈಗೊಂಡಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |