Urdu   /   English   /   Nawayathi

ರಾತ್ರಿ ಮನೆ ಮುಂದೆ ಮಲಗಿದ್ದ ವ್ಯಕ್ತಿ ಬೆಳಗಾಗುವಷ್ಟರಲ್ಲಿ ಬರ್ಬರ ಕೊಲೆ!

share with us

ಕೊಪ್ಪಳ: 03 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಮನೆಯ ಮುಂದೆ ಮಲಗಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದಲ್ಲಿ ನಡೆದಿದೆ. ಹಾಸಗಲ್ ಗ್ರಾಮದ ಸಿದ್ದಪ್ಪ ಹುನಗುಂದ (50) ಹತ್ಯೆಯಾಗಿರುವ ವ್ಯಕ್ತಿ. ಸಿದ್ದಪ್ಪ ನಿನ್ನೆ ರಾತ್ರಿ ಎಂದಿನಂತೆ ತನ್ನ ಮನೆಯ ಕಟ್ಟೆಯ ಮೇಲೆ ಮಲಗಿದ್ದ. ಆದ್ರೆ ಬೆಳಗ್ಗೆ ಆಗುವಷ್ಟರಲ್ಲಿ ಕೊಲೆಯಾಗಿದ್ದಾನೆ. ಯಾರೋ ದುಷ್ಕರ್ಮಿಗಳು ರಾತ್ರಿ ಬಂದು ಸಿದ್ದಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಠಾಣೆಯ ಪಿಎಸ್ಐ ಗುರುರಾಜ ಕಟ್ಟಿಮನಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا