Urdu   /   English   /   Nawayathi

2ಕೋಟಿ ರೂ. ಅಕ್ರಮ ಹಣ ಪತ್ತೆ, ಎಎಪಿ ಶಾಸಕ ಸೆರೆ

share with us

ನವದೆಹಲಿ: 09 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಆದಾಯ ತೆರಿಗೆ ಇಲಾಖೆ ದಾಳಿ ವೇಳೆ 2ಕೋಟಿ ರೂ. ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ(ಎಎಪಿ) ಶಾಸಕ ನರೇಶ್ ಬಲ್ಯನ್ ಅವರನ್ನು ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಭರವಸೆಯೊಂದಿಗೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷಕ್ಕೆ ಇದು ಭಾರೀ ಮುಜುಗರ ಉಂಟುಮಾಡಿದೆ ಈಗಾಗಲೇ ಕೆಲ ಸಚಿವರು ಮತ್ತು ಶಾಸಕರು ಭ್ರಷ್ಟಾಚಾರ-ಲಂಚಾವತಾರ ಸುಳಿಯಲ್ಲಿ ಸಿಲುಕಿರುವಾಗಲೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿರುವುದು ಕೇಜ್ರಿವಾಲ್‍ಗೆ ಮುಖಭಂಗವಾಗಿದೆ. ಅಕ್ರಮ ಮತ್ತು ಲೆಕ್ಕಕ್ಕೆ ಸಿಗದ ಹಣ ದಾಳಿ ವೇಳೆ ಪತ್ತೆಯಾಗಿದ್ದರಿಂದ ಉತ್ತಮ್ ನಗರ ಶಾಸಕ ನರೇಶ್ ಬಲ್ಯನ್ ಆಸ್ತಿ ವಿತರಕ ಮತ್ತು ಇಬ್ಬರನ್ನು ಐಟಿ ಅಧಿಕಾರಿಗಳು ದ್ವಾರಕಾದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಐಟಿ ದಾಳಿ ವೇಳೆ ಬಲ್ಯನ್ ಹೆಸರು ಕೇಳಿಬಂದಿದ್ದರಿಂದ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಹಣದ ಮೂಲದ ಬಗ್ಗೆ ಪ್ರಶ್ನಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا