Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ತುಮಕೂರು: 14 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 5ರ ಊರುಕೆರೆ ಸಮೀಪ ಬಸ್ ಚಲಿಸುತ್ತಿದ್ದ ವೇಳೆಯೇ ಬೆಂಕಿ ಹೊತ್ತಿ ಭಸ್ಮವಾಗಿದೆ. ಶುಕ್ರವಾರ ಮುಂಜಾನೆ 3.30ರ ಸುಮಾರು ಘಟನೆ ನಡೆದಿದ್ದು ಆ ವೇಳೆ ಬಸ್ ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅವರಲ್ಲಿ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಗಂಭೀರ ಗಾಯಗೊಂಡಿರುವ ಗುಲ್ಬರ್ಗ ನಿವಾಸಿ ನೀಲಮ್ಮ ಹಿರೇಮಠ(55) ಹಾಗೂ ಬಸ್ ಚಾಲಕ (ಹೆಸರು ಬಹಿರಂಗವಾಗಿಲ್ಲ) ನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಉಳಿದಂತೆ ಹುಣಸಗಿಯ ಪ್ರಸಾದ್ (31), ತಾಳಿಕೋಟೆಯ ತೌಸಿಫ್ (21), ಮೆಹಬೂಬ್ ಪಾಷ(25), ಶಬ್ಬೀರ್ (27), ಕೆಂಬಾವಿಯ ಆಭಿ ಎನ್ನುವವರಿಗೂ ಸಹ ಸುಟ್ಟ ಗಾಯಗಳಾಗಿದೆ.ಅವರುಗಳನ್ನು ಜಿಲ್ಲಾ ಆಸ್ಪತ್ರೆ, ಶ್ರೀದೇವಿ ಆಸ್ಪತ್ರೆ ಹಾಗೂ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದುರ್ಘಟನೆಗೀಡಾದ ಬಸ್ಸು ವಿಜಯಪುರದಿಂದ ಬೆಂಗಳೂರುಗೆ ಆಗಮಿಸುತ್ತಿತ್ತು. ರಾಯಲ್ ಟ್ರಾನ್ಸ್ ಪೋರ್ಟ್ ಗೆ ಸೇರಿದ್ದ ಸ್ಲೀಪರ್ಕೋಚ್ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಬಸ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಪ್ರಯಾಣಿಕರು ಚಾಲಕನಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಚಾಲಕ ಉದಾಸೀನ ತೋರಿ ಏನೂ ಆಗಿಲ್ಲವೆಂದು ನಿರ್ಲಕ್ಷದಿಂದ ಬಸ್ ಚಾಲನೆ ಮಾಡಿದ್ದಾನೆ. ಇದಾಗಿ ಸುಮಾರು 12 ಕಿಮೀ ದೂರ ಬಂದ ನಂತರ ಇಂಜಿನ್ನಲ್ಲಿ ದಟ್ಟ ಹೊಗೆ ಆವರಿಸಿ ಬೆಂಕಿ ಹೊತ್ತಿಕೊಂಡಿದೆ. ಅದಾಗ ಚಾಲಕ ಬಸ್ ನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಇಳಿಯಲು ಹೇಳುವಷ್ಟರಲ್ಲೇ ಬೆಂಕಿ ಸಂಪೂರ್ಣ ಬಸ್ ಗೆ ಆವರಿಸಿಕೊಂಡಿದೆ. ಮಾಹಿತಿ ಪಡೆದ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಮಧುಸೂದನ್, ಸಬ್ಇನ್ಸ್ಪೆಕ್ಟರ್ ಲಕ್ಷ್ಮಯ್ಯ, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |