Urdu   /   English   /   Nawayathi

ಮಡಿಕೇರಿ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

share with us

ಸಿದ್ದಾಪುರ(ಕೊಡಗು): 10 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಮಾಲ್ದಾರೆ ಸಮೀಪದ ಅಸ್ತಾನ ಹಾಡಿಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾಗಿದ್ದಾರೆ. ಪೆಮ್ಮಯ್ಯ ಶುಕ್ರವಾರ ಬೆಳಿಗ್ಗೆ ಮನೆಯಿಂದ ಪಟ್ಟಣಕ್ಕೆ ತೆರಳಿದ್ದು, ಮನೆಗೆ ಹಿಂತಿರುಗಿ ಬಾರದ ಹಿನ್ನೆಲೆಯಲ್ಲಿ ಮನೆಯವರು ಗ್ರಾಮದಲ್ಲಿ ಹುಡುಕಾಡಿದ್ದಾರೆ. ಆದರೆ ಅವರು ಪತ್ತೆ ಆಗಿರಲಿಲ್ಲ. ಶನಿವಾರ ಮತ್ತೆ ಹುಡುಕಾಟ ನಡೆಸಿದಾಗ ಅವರೆಗುಂದ ಗ್ರಾಮದ ಅಸ್ತಾನ ಹಾಡಿಯ ರಸ್ತೆಯ ಬಳದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾಡಾನೆ ದಾಳಿಯಿಂದಲೇ ಪೆಮ್ಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್, ಸಿದ್ದಾಪುರ ಪಿ.ಎಸ್.ಐ ಬೋಜಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا