Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 17 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕೊರೊನಾ ಆತಂಕದಿಂದ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್, ಕ್ಯಾಟರಿಂಗ್, ಬೀದಿಬದಿಯ ತಿಂಡಿತಿನಸು ವ್ಯಾಪಾರ, ಮಾಲ್ಗಳು, ಸಭೆ, ಸಮಾರಂಭಗಳಿಗೆ ಅವಶ್ಯಕ ಸಾಮಗ್ರಿ ಪೂರೈಸುವ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಿದೆ.
ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಕ್ಷೇತ್ರ ತಲ್ಲಣ
ಪ್ರವಾಸಿಗರ ಆಗಮನ ಇಳಿಮುಖ ವಾಗಿರುವುದು, ಮದುವೆ ಸಹಿತ ಶುಭ ಸಮಾರಂಭಗಳ ಮುಂದೂಡಿಕೆ ಮತ್ತು ಸರಳ ಆಚರಣೆಯಿಂದ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ನವರು ಶೇ. 60ರಿಂದ 80ರಷ್ಟು ಬಾಡಿಗೆ ಕುಸಿದಿದೆ ಎನ್ನುತ್ತಾರೆ ಉಭಯ ಜಿಲ್ಲಾ ಅಸೋಸಿಯೇಶನ್ಗಳ ಪ್ರಧಾನ ಕಾರ್ಯದರ್ಶಿಗಳಾದ ಆನಂದ್ ಮತ್ತು ರಮೇಶ್ ಕೋಟ್ಯಾನ್. ರಿಕ್ಷಾ ಚಾಲಕರ ಸ್ಥಿತಿಯೂ ಭಿನ್ನವಾಗಿಲ್ಲ. ಶುಭ ಸಮಾರಂಭಗಳ ಸರಳ ಆಚರಣೆಗೆ ಸರಕಾರ ಸೂಚಿಸಿದ್ದು ಕ್ಯಾಟರಿಂಗ್ ಕ್ಷೇತ್ರಕ್ಕೂ ಹೊಡೆತ ನೀಡಿದೆ. ಸಮಾ ರಂಭಗಳು ನಡೆದರೂ ಸಾವಿರ ಜನರ ಆರ್ಡರನ್ನು 100-150ಕ್ಕೆ ಇಳಿಸಲಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ದೊಡ್ಡ ಮತ್ತು 300ಕ್ಕೂ ಅಧಿಕ ಕ್ಯಾಟರಿಂಗ್ ಸಂಸ್ಥೆಗಳಿದ್ದು, 10,000ಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸಿದೆ. ಉಡುಪಿ ಜಿಲ್ಲೆಯಲ್ಲಿ 400ಕ್ಕೂ ಮೇಲ್ಪಟ್ಟು ಕ್ಯಾಟರಿಂಗ್ ಸಂಸ್ಥೆಗಳಿದ್ದು 11,000ಕ್ಕೂ ಮೇಲ್ಪಟ್ಟು ಮಂದಿ ದುಡಿಯುತ್ತಿದ್ದಾರೆ ಎಂದು ಕ್ಯಾಟರಿಂಗ್ಮಾಲಕರ ಸಂಘ ತಿಳಿಸಿದೆ.
ಬೀದಿಬದಿ ಆಹಾರ ವ್ಯಾಪಾರ
ಸಾರ್ವಜನಿಕ ಆರೋಗ್ಯ ಮತ್ತು ಸ್ವತ್ಛತೆ ದೃಷ್ಟಿಯಿಂದ ಬೀದಿಬದಿಯ ತಿಂಡಿ, ತಿನಿಸು, ಫಾಸ್ಟ್ಫುಡ್ ವ್ಯಾಪಾರ ವನ್ನು ಸ್ಥಗಿತಗೊಳಿಸಲು ನಗರಾಡಳಿತ ಸಂಸ್ಥೆಗಳು ಸೂಚಿಸಿವೆ,
ಇದರಿಂದ ಉಭಯ ಜಿಲ್ಲೆಗಳ ಬೀದಿಬದಿಯಲ್ಲಿನ ಫಾಸ್ಟ್ ಫುಡ್, ತಿಂಡಿತಿನಿಸುಗಳ ವ್ಯಾಪಾರಿಗಳ ಸಹಿತ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.
ಸರಕಾರ ನೆರವಿಗೆ ಬರಲಿ
ಕೊರೊನಾ ಆತಂಕದಿಂದ ಬಾಧಿತವಾಗಿರುವ ಕ್ಷೇತ್ರಗಳಲ್ಲಿ ದುಡಿಯು ತ್ತಿರುವವರ ನೆರವಿಗೆ ಸರಕಾರ ಬರಬೇಕು ಎಂಬ ಬೇಡಿಕೆ ವ್ಯಕ್ತವಾಗಿದೆ. ಬಹುತೇಕ ಮಂದಿ ಬ್ಯಾಂಕಿನಿಂದ ಸಾಲ ಪಡೆದು ಮಾಡುತ್ತಿದ್ದಾರೆ. ಅಂಥವರ ನೆರವಿಗೆ ಸರಕಾರ ಮುಂದಾಗಬೇಕು.
– ಆನಂದ್, ಪ್ರಧಾನ ಕಾರ್ಯದರ್ಶಿ ದ.ಕ. ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |