Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಯಾದಗಿರಿ: 06 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಬಾಬ್ರಿ ಮಸೀದಿ ಧ್ವಂಸ ದಿನವನ್ನು ಕರಾಳ ದಿನವನ್ನಾಗಿ ಆಚರಿಸುವಂತೆ ಒತ್ತಾಯಿಸಿ ಅಂಗಡಿಗಳನ್ನು ಮುಚ್ಚಿಸಲು ಮುಂದಾಗಿದ್ದ ಮುಸ್ಲಿಂ ಯುವಕರ ಗುಂಪಿನ ಮೇಲೆ ಬುಧವಾರ ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು. ಬೆಳಿಗ್ಗೆ 11.30ಕ್ಕೆ ನಗರದ ಟಿಪ್ಪುಸುಲ್ತಾನ ಸಂಯುಕ್ತರಂಗ ಸಂಘಟನೆಯು ಬಾಬ್ರಿ ಮಸೀದಿ ಧ್ವಂಸ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿತ್ತು. ಇದೇ ಸಂದರ್ಭದಲ್ಲಿ ರಟ್ಟೆಗೆ ಕಪ್ಪುಕಟ್ಟಿಕೊಂಡಿದ್ದ 30ಕ್ಕೂ ಹೆಚ್ಚು ಮುಸ್ಲಿಂ ಯುವಕರು ಸರ್ಕಾರಿ ಪದವಿ ಕಾಲೇಜು ಕಡೆಯಿಂದ ಚಿತ್ತಾಪುರ ಸಂಪರ್ಕ ರಸ್ತೆ ಪ್ರವೇಶಿಸಿದರು. ನಂತರ ರಸ್ತೆ ಪಕ್ಕದಲ್ಲಿನ ಮುಸ್ಲಿಮರ ಅಂಗಡಿ, ಹೋಟೆಲ್ಗಳನ್ನು ಮಾತ್ರ ಮುಚ್ಚಿಸಿ ಅಘೋಷಿತ ಬಂದ್, ಕರಾಳ ದಿನ ಆಚರಿಸುವಂತೆ ಒತ್ತಾಯಿಸುತ್ತಾ ಸುಭಾಷ್ ವೃತ್ತದ ಕಡೆ ಸಾಗಿದರು. ಹತ್ತಾರು ಅಂಗಡಿಗಳನ್ನು ಮುಚ್ಚಿಸಿದ ಬಳಿಕ ಈ ದಿಢೀರ್ ಬೆಳವಣಿಗೆಯಿಂದಾಗಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿತು. ಈ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಮುಸ್ಲಿಂ ಯುವಕರ ಗುಂಪಿನ ಮೇಲೆ ಲಘುಲಾಠಿ ಪ್ರಹಾರ ನಡೆಸಿದರು. ಚದುರಿದ ಯುವಕರು ಗುಂಪುನಿಂದ ದಿಕ್ಕಾಪಾಲಾಗಿ ಓಡಿದರು. ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಎಸ್. ಪಾಂಡುರಂಗ,‘ಅಘೋಷಿತ ಬಂದ್ ಆಚರಣೆಗೆ ಕುಮ್ಮಕ್ಕು ನೀಡಿದವರ ಹಾಗೂ ನಗರದಲ್ಲಿ ಶಾಂತಿ ಕದಡಲು ಮುಂದಾಗಿದ್ದ ಯುವಕರ ಗುಂಪಿನ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು. ಜಿಲ್ಲಾಡಳಿತಕ್ಕೆ ಮನವಿ: ಬಾಬ್ರಿ ಮಸೀದಿ ಧ್ವಂಸ ಖಂಡಿಸಿ ಮತ್ತು ಪ್ರಕರಣ ಶೀಘ್ರ ಇತ್ಯರ್ಥಪಡಿಸುವಂತೆ ಒತ್ತಾಯಿಸಿ ನಗರದ ಟಿಪ್ಪುಸುಲ್ತಾನ ಸಂಯುಕ್ತ ರಂಗದ ಜಿಲ್ಲಾ ಅಧ್ಯಕ್ಷ ಅಬ್ದುಲ್ ಕರೀಂ ನೇತೃತ್ವದಲ್ಲಿ ಮುಸ್ಲಿಂ ಯುವ ಮುಖಂಡರು ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |